Friday, September 20, 2024

Pm kisan 17th installment-17ನೇ ಕಂತು ಬಿಡುಗಡೆಗೆ ತಯಾರಿ, ಕಡ್ಡಾಯ ಪಿ ಎಂ ಕಿಸಾನ್ ಫಲಾನುಭವಿಗಳು Ekyc ಮಾಡಿಸಿ. ಲಿಂಕ್ ಇಲ್ಲಿದೆ.

ಕೇಂದ್ರ ಸರಕಾರದ ಹಲವು ಯೋಜನೆಗಳಲ್ಲಿ ರೈತರ ಮಹಾತ್ವಾಕಾಂಕ್ಷಿ ಯೋಜನೆಯಾದ ಕಿಸಾನ್ ಸಮ್ಮಾನ ನಿಧಿ ಯೋಜನೆಯು ರೈತರಿಗೆ ವರದಾನವಾಗಿದೆ. ಕೇಂದ್ರದ ಚುನಾವಣೆಯಿಂದ ತಡವಾಗಿದ್ದು, ಇದೀಗ ಮತ್ತೆ ಮುಂದೆವರಸಿದ್ದು, ಪ್ರಧಾನಿ ಮೋದಿ ಅವರು ಪ್ರಮಾಣವಚನ ಸ್ವೀಕರಿಸಿದ ಮೇಲೆ ರೈತರ ಪಿಎಂ ಕಿಸಾನ್ ನಿಧಿಯ 17ನೇ ಕಂತಿನ ಬಿಡುಗಡೆ ಅಧಿಕಾರ ಕಡತಕ್ಕೆ ಸಹಿ ಹಾಕಿದ್ದಾರೆ.

ನೀವು ಪಿಎಂ ಕಿಸಾನ್ ಯೋಜನೆಯ ಫಲಾನುಭವಿಯಾಗಿದ್ದರೆ, ನಿಮ್ಮ ಬ್ಯಾಂಕ್ ಖಾತೆಗೆ ಹಣ ಬಂದಿದೆಯಾ ಎಂದು ಖಚಿತ ಪಡಿಸಿಕೊಳ್ಳಿ. ಕೆಲವೊಮ್ಮೆ ಖಾತೆಗೆ ಹಣ ಜಮೆ ಆಗಲು ಒಂದು ವಾರ ಸಮಯ ತೆಗೆದುಕೊಳ್ಳುತ್ತದೆ. ಒಂದು ವೇಳೆ ಆಗಲು ನಿಮಗೆ ಹಣ ಬರದೇ ಹೋದಲ್ಲಿ ನೀವು ಹತ್ತಿರದ ಕೃಷಿ ಇಲಾಖೆಗೆ ಭೇಟಿ ಮಾಡಿ ವಿಚಾರಿಸಿ.

ಇದನ್ನೂ ಓದಿ: ಪ್ರಾಕೃತಿಕ ವಿಕೋಪದ ಮಳೆ, ಗಾಳಿಯಿಂದ ಮನೆ ಮತ್ತು ಕೃಷಿಗೆ ಹಾನಿಯಾದರೆ ಅದರ ಪರಿಹಾರಕ್ಕೆ ಎಲ್ಲಿ ಅರ್ಜಿ ಸಲ್ಲಿಸಬೇಕು ನಿಮಗೆ ಗೊತ್ತೆ?

ಕೇಂದ್ರ ಸರಕಾರವು ರೈತರ ಕಲ್ಯಾಣಕ್ಕಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ಅದರಲ್ಲಿ ರೈತರಿಗೆ ತುಂಬಾ ಅನುಕೂಲಕರವಾದ ಯೋಜನೆಯಾದ ಕಿಸಾನ್ ಸಮ್ಮಾನ ನಿಧಿ ಯೋಜನೆ ಈ ಯೋಜನೆಯಡಿ ರೈತರಿಗೆ ವರ್ಷಕ್ಕೆ 6 ಸಾವಿರ ಹಣ ಬರುತ್ತದೆ. ಈ ಹಣವು ನಾಲ್ಕು ತಿಂಗಳಿಗೊಮ್ಮೆ ನೇರ ರೈತರ/ಫಲಾನುಭವಿಗಳ ಖಾತೆಗೆ ಜಮೆಯಾಗುತ್ತದೆ. 17ನೇ ಕಂತಿನ ಹಣ ಬಿಡುಗಡೆಗೆ ಪ್ರಧಾನ ಮಂತ್ರಿಗಳು ಸಹಿ ಮಾಡಿದ್ದು ಇನ್ನೂ ಒಂದು ವಾರದೊಳಗೆ ಫಲಾನುಭವಿಗಳ ಖಾತೆಗೆ ಈ ಕಿಸಾನ್ ಸಮ್ಮಾನ ನಿಧಿ ಯೋಜನೆಯ ಹಣ ಜಮೆಯಾಗಲಿದೆ.

ಯೋಜನೆಯ ಫಲಾನುಭವಿಗಳ ಪಟ್ಟಿಯಲ್ಲಿ ನಿಮ್ಮ ಹೆಸರು ಇದಿಯಾ, ಇಲ್ಲವಾ ತಿಳಿಯಲು ಈ ಕೆಳಗಿನ ಕ್ರಮಗಳನ್ನು ಅನುಸರಿಸಿ.

ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಅಧಿಕೃತ Pm kisan.gov.in ಈ ವೆಬ್ಸೈಟ್ ಭೇಟಿ ಮಾಡಿ, ಅದರಲ್ಲಿ ಬೆನಿಫಿಶಿರಿ ಲಿಸ್ಟ ಮೇಲೆ ಕ್ಲಿಕ್ ಮಾಡಿ. ನಂತರ ಇದರಲ್ಲಿ ನಿಮ್ಮ ರಾಜ್ಯ, ಜಿಲ್ಲೆ, ತಾಲೂಕು, ಗ್ರಾಮ ಆಯ್ಕೆ ಮಾಡಿಕೊಳ್ಳಿ. ನಿಮ್ಮ ಊರಿನ ಎಲ್ಲಾ ಫಲಾನುಭವಿಗಳ ಪಟ್ಟಿ/ಹೆಸರು ಕಾಣುತ್ತದೆ. ಅದರಲ್ಲಿ ನಿಮ್ಮ ಹೆಸರಿದೆಯಾ ನೋಡಿ ಪರಿಶೀಲಿಸಿಕೊಳ್ಳಿ.

ಇದನ್ನೂ ಓದಿ: ಈ ವರ್ಷ ಯಾವ ಬೆಳೆಗೆ ಎಷ್ಟು ಬೆಳೆ ವಿಮೆ ಕಟ್ಟಬೇಕು? ಕಟ್ಟಿದರೇ ಎಷ್ಟು ಪರಿಹಾರ ಬರುತ್ತೆ, ಎಂಬ ಮಾಹಿತಿಯನ್ನು ನಿಮ್ಮ ಮೊಬೈಲ್ ನಲ್ಲಿ ತಿಳಿದುಕೊಳ್ಳಬಹುದು.

ಹಣ ಬರದೆ ಇರಲು ಮತ್ತು ಪಟ್ಟಿಯಲ್ಲಿ ನಿಮ್ಮ ಹೆಸರು ಇಲ್ಲದಿರಲೂ ಕಾರಣಗಳಿವೆ!

ಒಂದು ವೇಳೆ ಪಿಎಂ ಕಿಸಾನ್ ಯೋಜನೆಯ ಫಲಾನುಭವಿಗಳ ಲಿಸ್ಟನಲ್ಲಿ ನಿಮ್ಮ ಹೆಸರು ಇಲ್ಲದೇ ಇದ್ದರೆ ಅದಕ್ಕೆ ಹಲವಾರು ಕಾರಣಗಳಿವೆ. ನೀವೂ Ekyc ಮಾಡದೇ ಇರುವುದು ಅಥವಾ ಸರಿಯಾಗಿ Ekyc ಮಾಡಿಸದೆ ಇರುವುದು. ನೀವೂ ಈ ಯೋಜನೆಯ ಫಲಾನುಭವಿಗಳ ಅರ್ಹತೆ ಅಂಶಗಳಿಂದ ಹೊರಗೆ ಇರಬಹುದು.

ರೈತರು ಈ ಯೋಜನೆಯ ಫಲಾನುಭವಿಗಳಾಗಿದ್ದರೆ ಕಡ್ಡಾಯ Ekyc ಮಾಡಿಸಬೇಕು, ಇಲ್ಲವಾದಲ್ಲಿ ನಿಮಗೆ ಈ ಯೋಜನೆಯ ಹಣ ಬರುವುದಿಲ್ಲ. Ekyc ಮಾಡಿಸಲು ಹತ್ತಿರದ ಕೃಷಿ ಇಲಾಖೆ, ಗ್ರಾಮ ಒನ್ ಮತ್ತು ಸೇವಾ ಸಿಂಧು ಸೈಬರ್ ಗಳಿಗೆ ಭೇಟಿ ಮಾಡಿ Ekyc ಮಾಡಿಸಿಕೊಳ್ಳಿ.

ಇತ್ತೀಚಿನ ಸುದ್ದಿಗಳು

Related Articles