Friday, September 20, 2024

PM Kisan Ekyc-ಕೇಂದ್ರ ಸರಕಾರದ ಕಿಸಾನ್ ಸಮ್ಮಾನ್ ನಿಧಿ ರೂ.6000 ಕ್ಕೆ Ekyc ಕಡ್ಡಾಯ ಮಾಡಿದ ಸರಕಾರ! ನಿಮ್ಮದು Ekyc ಆಗಿದೆಯೇ ಇಲ್ಲಿ ಚೆಕ್ ಮಾಡಿಕೊಳ್ಳಿ.

ಕೇಂದ್ರ ಸರಕಾರವು ರೈತರ ಕಲ್ಯಾಣಕ್ಕೆ ಹಲವಾರು ಯೋಜನೆಗಳನ್ನು ಜಾರಿ ತಂದಿದೆ. ಅದರಲ್ಲಿ ಜನಪ್ರಿಯ ಯೋಜನೆಗಳಲ್ಲಿ ಒಂದಾದ ಕಿಸಾನ್ ಸಮ್ಮಾನ್ ನಿಧಿ ಯೋಜನೆ. ಈ ಯೋಜನೆಯಡಿ ಕೃಷಿ ಜಮೀನು ಹೊಂದಿದ ರೈತರಿಗೆ ವರ್ಷಕ್ಕೆ 6 ಸಾವಿರ ಹಣವನ್ನು ನಾಲ್ಕು ತಿಂಗಳಿಗೊಮ್ಮೆ ಮೂರು ಹಂತಗಳಲ್ಲಿ ರೈತರಿಗೆ ನೇರ ಅವರ ಖಾತೆಗೆ ಜಮೆ ಮಾಡಲಾಗುತ್ತಿದೆ.

ಇಲ್ಲಿಯವರೆಗೂ ಈ ಕಿಸಾನ್ ಸಮ್ಮಾನ್ ನಿಧಿ(pm kisan samman) ಯೋಜನೆಯ ಹಣವು 18ಕಂತು ಬಿಡುಗಡೆ ಮಾಡಲಾಗಿದೆ. ಹಾಗಾಗಿ ನಿಮಗೆ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಹಣವು ಎಷ್ಟು ಕಂತು ಬಂದಿದೆ ಎಂದು ತಿಳಿಯಲು ನಿಮ್ಮ ಪಾಸ್ ಬುಕ್ ಚೆಕ್ ಮಾಡಿಕೊಳ್ಳಿ.

ನಮ್ಮ ಭಾರತ ದೇಶದಲ್ಲಿ ಸಣ್ಣ ಮತ್ತು ಅತೀ ಸಣ್ಣ ರೈತರೆ ಹೆಚ್ಚಾಗಿ ಇರುವುದರಿಂದ ಅವರಿಗೆ ಈ ಕಿಸಾನ್ ಸಮ್ಮಾನ್ ನಿಧಿ(pm kisan samman nidhi) ಯೋಜನೆಯವು ಸಣ್ಣ ಮತ್ತು ಅತೀ ಸಣ್ಣ ರೈತರಿಗೆ ಬಿತ್ತನೆ ಬೀಜಗಳು ಮತ್ತು ರಸ ಗೊಬ್ಬರಗಳನ್ನು ಹಾಗೂ ಸಣ್ಣ ಪ್ರಮಾಣದ ಕೃಷಿ ಪರಿಕರಗಳನ್ನು ಖರೀದಿಮಾಡಲು ಅನೂಕೂಲವಾಗಲು ಕೇಂದ್ರ ಸರಕಾರ ಈ ಯೋಜನೆಯನ್ನು ಜಾರಿಗೆ ತಂದಿದೆ.

ಕೇಂದ್ರ ಸರಕಾರವು ರೈತರಿಗೆ ಮುಂಗಾರು ಹಂಗಾಮಿನಲ್ಲಿ ಬಿತ್ತನೆ ಬೀಜ ಪಡೆಯಲು ರೈತರಿಗೆ ಈ ಹಣವು ಸಹಾಯವಾಗಲಿದೆ. ಹಾಗಾಗಿ ರೈತರು ಪಿಎಂ ಕಿಸಾನ್ ಯೋಜನೆಯ ಹಣವನ್ನು ಸದುಪಯೋಗ ಪಡಿಸಿಕೊಳ್ಳಬಹುದು. ಇದರಿಂದ ರೈತರಿಗೆ ಪಿಎಂ ಕಿಸಾನ್ ಯೋಜನೆಯ ಹಣವು ತುಂಬಾ ಪ್ರಯೋಜನಕಾರಿಯಾಗಿದೆ.

ಇದನ್ನೂ ಓದಿ: ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಇಲ್ಲಿಯವರೆಗೂ ಎಷ್ಟು ಕಂತು ಹಣ ಬಂದಿದೆ ಎಂದು ತಿಳಿಯಲು ಇಲ್ಲಿದೆ ಮಾಹಿತಿ.

PM-Kisan pending reasons-ಕಿಸಾನ್ ಸಮ್ಮಾನ್ ನಿಧಿ ಹಣ ಬರದೆ ಇರಲು ಕಾರಣಗಳು:

1)E-kyc ಮಾಡಿಸದೆ ಬಾಕಿ ಇರುವ ರೈತರು.

2)ಒಂದೇ ಕುಟುಂಬ ಪರಿಶೀಲನೆಗೆ ಬಾಕಿ ಇರುವವರು.

3)ಕೃಷಿ ಜಮೀನು ವರ್ಗಾವಣೆ ಮತ್ತು ಮಾರಾಟ ಮಾಡಿರುವುದು.

4)RTC ಮತ್ತು ಆಧಾರ್ ಕಾರ್ಡ್ ನಲ್ಲಿ ಹೆಸರುಗಳ ಬದಲಾವಣೆ ಇರುವವರು.

5)ಬ್ಯಾಂಕ್ ಖಾತೆಗೆ ಆಧಾರ್ ಸಂಖ್ಯೆ ಲಿಂಕ್(aadhar seeding) ಮಾಡದೆ ಇರುವವರು.

6)village VNO login physical verification ಬಾಕಿ ಇರುವವರು.

7)income tax file ಮಾಡಿರುವವರು.

ಈ ಮೇಲೆ ತಿಳಿಸಿದ ಎಲ್ಲಾ ಕಾರಣಗಳಿಂದ ಹಾಗೂ ಇದರಲ್ಲಿ ಯಾವುದಾದರು ಒಂದು ಕಾರಣಗಳಲ್ಲಿ ನಿಮ್ಮ ಹೆಸರು ಇದ್ದರೆ ನಿಮಗೆ ಹಣ ಬರದೆ ಬಾಕಿ ಇರುವ ಸಾದ್ಯತೆಗಳಿವೆ. ಇದನ್ನು ಪರಿಶೀಲನೆ ಮಾಡಲು ನಿಮ್ಮ ಹತ್ತಿರದ ಕೃಷಿ ಇಲಾಖೆ ರೈತ ಸಂಪರ್ಕ ಕೇಂದ್ರಗಳಿಗೆ ಭೇಟಿ ಮಾಡಿ ಮಾಹಿತಿ ತಿಳಿದು ಕೊಳ್ಳಿ.

ರೈತರು ಈ ಯೋಜನೆಯ ಫಲಾನುಭವಿಗಳಾಗಿದ್ದರೆ ಕಡ್ಡಾಯ Ekyc ಮಾಡಿಸಬೇಕು, ಇಲ್ಲವಾದಲ್ಲಿ ನಿಮಗೆ ಈ ಯೋಜನೆಯ ಹಣ ಬರುವುದಿಲ್ಲ. Ekyc ಮಾಡಿಸಲು ಹತ್ತಿರದ ಕೃಷಿ ಇಲಾಖೆ, ಗ್ರಾಮ ಒನ್ ಮತ್ತು ಸೇವಾ ಸಿಂಧು ಸೈಬರ್ ಗಳಿಗೆ ಭೇಟಿ ಮಾಡಿ Ekyc ಮಾಡಿಸಿಕೊಳ್ಳಿ.

E-kyc ಆಗಿದೆಯೇ ಇಲ್ಲವೇ ಎಂದು ತಿಳಿಯುವ ವಿಧಾನ:

ಮೊದಲಿಗೆ ಇಲ್ಲಿ ನೀಡಲಾದ PM kisan.gov.in ಮೇಲೆ ಕ್ಲಿಕ್ ಮಾಡಿ ಅಧಿಕೃತ ವೆಬ್ಸೈಟ್ ಪ್ರವೇಶ ಮಾಡಬೇಕು. ನಿಮಗೆ ಕೇಂದ್ರ ಸರಕಾರದ ಪಿಎಮ್ ಕಿಸಾನ್ ಸಮ್ಮಾನ್ ನಿಧಿ ಪೋರ್ಟಲ್ ತೆರದುಕೊಳ್ಳುತ್ತದೆ.

ಇದನ್ನೂ ಓದಿ: ರೈತರೇ 2023 ರಲ್ಲಿ ಬೆಳೆ ಸಮೀಕ್ಷೆಯಲ್ಲಿ ನಿಮ್ಮ ಪಹಣಿ/RTC ಗೆ ದಾಖಲಾದ ಬೆಳೆ ಯಾವುದು ಎಂದು ತಿಳಿಯಲು ಇಲ್ಲಿದೆ ಮಾಹಿತಿ!

ವಿಧಾನ-1: ಪಿಎಮ್ ಕಿಸಾನ್ ಸಮ್ಮಾನ್ ನಿಧಿ ಪೋರ್ಟಲ್ ತೆರೆದುಕೊಂಡ ಮೇಲೆ Farmers Corner ನಲ್ಲಿ ಹಲವಾರು ಅಂಕಣಗಳಿವೆ E-kyc ಅಂಕಣ,New farmer registration ಅಂಕಣ, Know your status ಅಂಕಣ, Beneficiary list ಅಂಕಣ,Name correction as per Aadhar ಅಂಕಣ ಹೀಗೆ ಹಲವಾರು ಅಂಕಣಗಳಿವೆ.

ವಿಧಾನ-2: ಈ ಎಲ್ಲಾ ಅಂಕಣಗಳಲ್ಲಿ ನೀವು E-kyc ಅಂಕಣ ಮೇಲೆ ಕ್ಲಿಕ್ ಮಾಡಿ.

ವಿಧಾನ-3: ನಂತರ E-kyc ಅಂಕಣ ಮೇಲೆ ಕ್ಲಿಕ್ ಮಾಡಿ ಅಲ್ಲಿ ನಿಮ್ಮ ಆಧಾರ‍ ನಂಬರ್ ಹಾಕಿ E-kyc ಆಗಿದಯೇ ಇಲ್ಲವೋ ಎಂದು ತಿಳಿದು ಕೊಳ್ಳಬಹುದು.

ಇತ್ತೀಚಿನ ಸುದ್ದಿಗಳು

Related Articles