Thursday, September 19, 2024

Free Horticulture Training-ತೋಟಗಾರಿಕೆ ಇಲಾಖೆಯಿಂದ ರೈತರ ಮಕ್ಕಳಿಗೆ ಶಿಷ್ಯವೇತನದೊಂದಿಗೆ ಉಚಿತ ತರಬೇತಿಗೆ ಅರ್ಜಿ ಆಹ್ವಾನ.

ತೋಟಗಾರಿಕೆ ಇಲಾಖೆ ಪ್ರತಿ ವರ್ಷ ನೀಡುವ ರೈತರ ಮಕ್ಕಳಿಗೆ ಉಚಿತ ತರಬೇತಿಯನ್ನು 2024-25ನೇ ಸಾಲಿನ 10 ತಿಂಗಳ ನೀಡುವ ತರಬೇತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅದರ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿದುಕೊಳ್ಳುವ.

ಚಿಕ್ಕಮಗಳೂರು, ದಕ್ಷಿಣಕನ್ನಡ, ಉಡುಪಿ, ಗದಗ, ಕೊಪ್ಪಳ, ಹಾವೇರಿ, ಉತ್ತರ ಕನ್ನಡ ಜಿಲ್ಲೆ ಸೇರಿದಂತೆ ವಿವಿಧ ಜಿಲ್ಲೆಗಳ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. 2024 ಜೂನ್ 15 ರಿಂದ 2025 ರ ಮಾರ್ಚ 31 ರವರೆಗೆ 9 ತಿಂಗಳಗಳ ಕಾಲ ತರಬೇತಿ ನೀಡಲಾಗುತ್ತದೆ. ಪ್ರತಿ ತಿಂಗಳು ಅಭ್ಯರ್ಥಿಗೆ ಶಿಷ್ಯ ವೇತನವಾಗಿ ರೂ.1750/ ನೀಡಲಾಗುತ್ತದೆ.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ ಎಸ್.ಎಸ್.ಎಲ್.ಸಿ ಉತ್ತೀರ್ಣವಾಗಿರಬೇಕು. ಅಭ್ಯರ್ಥಿಗಳ ಪೋಷಕರು ತಂದೆ ಅಥವಾ ತಾಯಿ ಕಡ್ಡಾಯವಾಗಿ ಕೃಷಿ ಜಮೀನು ಹೊಂದಿರಬೇಕು. ಈ ತರಬೇತಿಯು ರೈತರ ಮಕ್ಕಳಿಗಾಗಿ ಇರುವುದರಿಂದ ಪೋಷಕರು ಕಡ್ಡಾಯ ಕೃಷಿ ಜಮೀನು ಹೊಂದಿರಲೇಬೇಕು. ಕೃಷಿ ಮಾಡುತ್ತಿರಲು ತಿಳಿಯಲು ಅಭ್ಯರ್ಥಿಯ ಪೋಷಕರ ಹೆಸರಿನಲ್ಲಿರುವ ಪಹಣಿ/RTC ನೀಡುವುದು ಕಡ್ಡಾಯವಾಗಿದೆ. ಅಭ್ಯರ್ಥಿಗಳು ಕೃಷಿ ಮತ್ತು ತೋಟದ ಕೆಲಸ ಮಾಡುವಂತವರಾಗಿರಬೇಕು.

ಇದನ್ನೂ ಓದಿ: ಪ್ರಾಕೃತಿಕ ವಿಕೋಪದ ಮಳೆ, ಗಾಳಿಯಿಂದ ಮನೆ ಮತ್ತು ಕೃಷಿಗೆ ಹಾನಿಯಾದರೆ ಅದರ ಪರಿಹಾರಕ್ಕೆ ಎಲ್ಲಿ ಅರ್ಜಿ ಸಲ್ಲಿಸಬೇಕು ನಿಮಗೆ ಗೊತ್ತೆ?

ರೈತರ ಮಕ್ಕಳಾದ ಮಹಿಳೆ ಮತ್ತು ಪುರುಷ ಅಭ್ಯರ್ಥಿಗಳಿಗೆ 9 ತಿಂಗಳ ತರಬೇತಿ ನಡೆಯಲಿದೆ. ಅಭ್ಯರ್ಥಿಗಳ ವಯೋಮಿತಿಯು ಸಾಮಾನ್ಯ ವರ್ಗದ ಅಭ್ಯರ್ಥಿಯು 18 ರಿಂದ 30 ವರ್ಷದೊಳಗೆ, ಪರಿಶಿಷ್ಠ ಜಾತಿ ಮತ್ತು ಪರಿಶಿಷ್ಠ ಪಂಗಡದ ವರ್ಗದ ಅಭ್ಯರ್ಥಿಯು 18 ರಿಂದ 33ವರ್ಷ ದೊಳಗಿರಬೇಕು. ಮಾಜಿ ಸೈನಿಕ ಅಭ್ಯರ್ಥಿಗಳಿಗೆ 33ರಿಂದ 65 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಜೂನ್ 3 ರ ಸಂಜೆ 5:30 ರೊಳಗೆ ಆಯಾ ಜಿಲ್ಲಾ ತೋಟಗಾರಿಕೆ ಉಪ ನಿರ್ದೇಶಕರ ಕಛೇರಿಗೆ ಸಲ್ಲಿಸಬೇಕು. ಹಾಗೂ ಅರ್ಜಿ ಸಲ್ಲಿಕೆ ದಿನವೇ ಸಂದರ್ಶನದ ದಿನಾಂಕವನ್ನು ಕೇಳಿ ತಿಳಿದುಕೊಳ್ಳುವುದು ಸೂಕ್ತ. ಅಥವಾ ಜೂನ್ 6 ರಂದು ಆಯಾ ಜಿಲ್ಲೆಯ ತೋಟಗಾರಿಕೆ ಉಪ ನಿರ್ದೇಶಕರ ಕಛೇರಿಯಲ್ಲಿ ಸಂದರ್ಶನಕ್ಕೆ ಹಾಜರಾಗಬೇಕು.

ಹಾವೇರಿ ಜಿಲ್ಲೆಯ ಅಭ್ಯರ್ಥಿಗಳಿಗೆ ಜೂನ್ 6 ರಂದು 11 ಗಂಟೆಗೆ ಹಾವೇರಿ ಜಿಲ್ಲೆಯ ದೇವಗಿರಿ ಜಿಲ್ಲಾಡಳಿತ ಭವನದ ತೋಟಗಾರಿಕೆ ಉಪ ನಿರ್ದೇಶಕರ ಕಛೇರಿಯಲ್ಲಿ ಸಂದರ್ಶನ ನಡೆಯಲಿದೆ. ಕೊಪ್ಪಳ ಜಿಲ್ಲೆಯ ಅಭ್ಯರ್ಥಿಗಳಿಗೆ ಜೂನ್ 6 ರಂದು 10 ಗಂಟೆಗೆ ಕೊಪ್ಪಳ ಜಿಲ್ಲೆಯ ತೋಟಗಾರಿಕೆ ಉಪ ನಿರ್ದೇಶಕರ ಕಛೇರಿಯಲ್ಲಿ ಸಂದರ್ಶನ ನಡೆಯಲಿದೆ ಎಂದು ತೋಟಗಾರಿಕೆ ಉಪ ನಿರ್ದೇಶಕರು ಕೃಷ್ಣ ಉಕ್ಕುಂದ ಅವರು ತಿಳಿಸಿದ್ದಾರೆ.

ತರಬೇತಿ ನೀಡುವ ವಸತಿ ಗೃಹಗಳ ಮಾಹಿತಿ:

ತರಬೇತಿಗೆ ಸೇರುವ ಪ್ರತಿ ಅಭ್ಯರ್ಥಿಯು ತರಬೇತಿ ಕೇಂದ್ರದ ವಸತಿ ಗೃಹಗಳಲ್ಲಿ ತಂಗುವುದು ಕಡ್ಡಾಯವಾಗಿರುತ್ತದೆ. ಮಹಿಳಾ ಅಭ್ಯರ್ಥಿಗಳಿಗೆ ಪ್ರತ್ಯೇಕ ಸುರಕ್ಷಿತ ಗೃಹ ವಸತಿ ವ್ಯವಸ್ತೆಯನ್ನು ಕಲ್ಪಿಸಲಾಗಿರುತ್ತದೆ. ಆಯಾ ತರಬೇತಿ ಕೇಂದ್ರದ ಮುಖ್ಯಸ್ಥರು, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಮತ್ತು ತೋಟಗಾರಿಕೆ ಉಪ ನಿರ್ದೇಶಕರು ಜವಾಬ್ದಾರರಾಗಿರುತ್ತಾರೆ.

ಇದನ್ನೂ ಓದಿ: ಪಶು ಸಂಗೋಪನೆಯಲ್ಲಿ ಲಾಭ ಹೆಚ್ಚಿಸಲು ಈ ಕ್ರಮಗಳನ್ನು ಅನುಸರಿಸಿ ಸಾಕು!

ಪರೀಕ್ಷೆ ಪಡೆಯಲು ಅರ್ಹತೆಗಳು ಕಡ್ಡಾಯ:

ತರಬೇತಿ ಅರ್ಜಿ ಪಡೆಯಲು ಈ ಲಿಂಕ್ ಮೇಲೆ ಕ್ಲಿಕ್ https://horticulturedir.karnataka.gov.in/ ಮಾಡಿ. ತರಬೇತಿ ಅವಧಿಯಲ್ಲಿ ಅಭ್ಯರ್ಥಿಗಳು ಶೇಕಡಾ 75ಕ್ಕಿಂತ ಕಡಿಮೆ ಹಾಜರಾತಿ ಇದ್ದಲ್ಲಿ ಪರೀಕ್ಷೆಗೆ ಹಾಜರಾಗಲು ಅರ್ಹತೆ ಇರುವುದಿಲ್ಲ.

ತರಬೇತಿ ಪರೀಕ್ಷೆಗಳು ಮತ್ತು ಮೌಲ್ಯಮಾಪನ:

ತರಬೇತಿ ಅಂತ್ಯದಲ್ಲಿ ಪ್ರಾಯೋಗಿಕ ಪರೀಕ್ಷೆ ಹಾಗೂ ಲಿಖಿತ ಪರೀಕ್ಷೆಗಳನ್ನು ನಡೆಸಲಾಗುವುದು. ಪ್ರಾಯೋಗಿಕ ಪರೀಕ್ಷೆ ಹಾಗೂ ಲಿಖಿತ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಲು ಕನಿಷ್ಠ ಶೇ. 35 ಅಂಕಗಳನ್ನು ಪಡೆಯಬೇಕಾಗಿರುತ್ತಯದೆ. ಶೇ. 50 ಅಂಕಗಳನ್ನು ಪಡೆದವರಿಗೆ ದ್ವಿತೀಯ ದರ್ಜೆ ಹಾಗೂ ಶೇ.60 ಕ್ಕಿಂತ ಹೆಚ್ಚು ಅಂಕ ಪಡೆದ ಅಭ್ಯರ್ಥಿಗಳಿಗೆ ಪ್ರಥಮ ದರ್ಜೆಯನ್ನು ನೀಡಲಾಗುವುದು.

ವಿಶೇಷ ಸೂಚನೆ: ಈ ತರಬೇತಿಯ ಇನ್ನೂ ಹೆಚ್ಚಿನ ಮಾಹಿತಿಗೆ ನಿಮ್ಮ ತಾಲೂಕುಗಳಲ್ಲಿರುವ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಛೇರಿಯನ್ನು ಭೇಟಿ ಮಾಡಿ ವಿಚಾರಿಸಿ.

ಇತ್ತೀಚಿನ ಸುದ್ದಿಗಳು

Related Articles