Thursday, September 19, 2024

ಬೋರ್ವೆಲ್ ಕೊರೆಸಲು 2 ಲಕ್ಷ ಸಹಾಯಧನ ಯಾವ ನಿಗಮದಿಂದ, ಯಾರಿಗೆ, ಮಾಹಿತಿ ತಿಳಿದುಕೊಳ್ಳಿ.

ಗಂಗಾ ಕಲ್ಯಾಣ ಯೋಜನೆಯಡಿ ಫಲಾನುಭವಿ ರೈತರಿಗೆ ಬೋರ್ವೆಲ್ ಕೊರೆಸಲು 2 ಲಕ್ಷ ರೂಪಾಯಿ ಸಹಾಯಧನ ನೀಡಲಾಗುತ್ತದೆ. ಈ ಸೌಲಭ್ಯ ಪಡೆಯಲು ಯಾರೆಲ್ಲ ಅರ್ಹರು? ಅರ್ಜಿ ಎಲ್ಲಿ ಸಲ್ಲಿಸಬೇಕು? ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳೇನು? ಇತ್ಯಾದಿ ಸಮಗ್ರ ಮಾಹಿತಿ ಇಲ್ಲಿದೆ…

ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಅನುಕೂಲವಾಗಲೇಂದೆ ಪ್ರತಿ ವರ್ಷ ಸರ್ಕಾರ ವಿವಿಧ ನಿಗಮ ಮಂಡಳಿಗಳಿಂದ ನೀರಾವರಿ ಯೋಜನೆಗಳನ್ನು ಜಾರಿಗೆ ತರುತ್ತಿರುತ್ತೆ.ಅದರಲ್ಲಿ ಇದು ಕೂಡ ಒಂದಾಗಿರುವ ನೀರಾವರಿ ಯೋಜನೆಯಾದ ಗಂಗಾ ಕಲ್ಯಾಣ ಯೋಜನೆಯಡಿ ಬೊರ್ವೆಲ್ ಸಹಾಯಧನಕ್ಕೆ ವಿವಿಧ ನಿಗಮಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈಗಾಗಲೇ ಅರಸು ನಿಗಮದಿಂದ ವಿವಿಧ ಜಾತಿ, ಪಂಗಡದ ಸಣ್ಣ ಮತ್ತು ಅತೀ ಸಣ್ಣ ರೈತರಿಂದ ಅರ್ಜಿ ಆಹ್ವಾನಿಸಲಾಗಿದ್ದು;

ಇದೀಗ 2022-23ನೇ ಸಾಲಿನಲ್ಲಿ ಅನುಷ್ಠಾನಗೊಳಿಸುತ್ತಿರುವ ಗಂಗಾ ಕಲ್ಯಾಣ ನೀರಾವರಿ ಯೋಜನೆಯಡಿ ಸೌಲಭ್ಯ ಪಡೆಯಲು ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮದ ವತಿಯಿಂದ ಅರ್ಜಿ ಆಹ್ವಾನಿಸಲಾಗಿದೆ. ರಾಜ್ಯ ಸರ್ಕಾರವು ಆಯವ್ಯಯದಲ್ಲಿ ಒದಗಿಸಿರುವ ಅನುದಾನದಿಂದ ಉಪ್ಪಾರ ಮತ್ತು ಇತರ ಉಪಜಾತಿಗಳಿಗೆ ಸೇರಿದ ಸಣ್ಣ ಮತ್ತು ಅತಿ ಸಣ್ಣ ರೈತರು ಈ ಸೌಲಭ್ಯ ಪಡೆಯಬಹುದು.

ಹಿಂದುಳಿದ ವರ್ಗಗಳ ಪ್ರವರ್ಗ-1 ರಲ್ಲಿ ಬರುವ ಉಪ್ಪಾರ ಮತ್ತು ಇದರ ಉಪಜಾತಿಗೆ ಸೇರಿದ ಸಣ್ಣ ಮತ್ತು ಅತಿ ಸಣ್ಣ ರೈತರು ಹೊಂದಿರುವ ಕೃಷಿ ಭೂಮಿಗೆ ನೀರಾವರಿ ಸೌಲಭ್ಯ ಹೊಂದಿಲ್ಲದಿದ್ದಲ್ಲಿ ನೀರಾವರಿ ಸೌಲಭ್ಯವನ್ನು ಒದಗಿಸಿ ಕೃಷಿ ಅಭಿವೃದ್ಧಿಗೆ ನೆರಡವು ನೀಡುವುದು ಈ ಯೋಜನೆಯ ಉದ್ದೇಶವಾಗಿದೆ. ಫಲಾನುಭವಿ ರೈತರಿಗೆ ಗಂಗಾ ಕಲ್ಯಾಣ ಯೋಜನೆಯಡಿ ನೀಡಲಾಗುವ ಈ ಘಟಕದ ವೆಚ್ಚವು ಎರಡೂವರೆ ಲಕ್ಷ ರೂಪಾಯಿ(2.50 ಲಕ್ಷ)ಆಗಿರುತ್ತದೆ. ಹೆಚ್ಚುವರಿ ಹಣದ ಅಗತ್ಯವಿದ್ದಲ್ಲಿ ವಾರ್ಷಿಕ ಶೇ.4ರ ಬಡ್ಡಿದರದಲ್ಲಿ ಮೂರು ವರ್ಷಗಳ ಮರುಪಾವತಿ ಅವಧಿಯೊಂದಿಗೆ 50,000 ರೂಪಾಯಿಯನ್ನು ಸಾಲದ ರೂಪದಲ್ಲಿ ಬ್ಯಾಂಕಿನಿಂದ ನೀಡಲಾಗುತ್ತದೆ.

ಯಾರೆಲ್ಲ ಅರ್ಹರು:

ಇದನ್ನೂ ಓದಿ: 250 ಬಗೆಯ ಅಧಿಕ ಉದ್ದಿಮೆಗಳನ್ನು ಪ್ರಾರಂಭಿಸಲು ಗರಿಷ್ಠ 50 ಲಕ್ಷಗಳವರೆಗೆ ಸಾಲಕ್ಕೆ ಸಹಾಯಧನ ಪಡೆಯಲು ಅರ್ಜಿ ಆಹ್ವಾನ


ಅರ್ಜಿದಾರರು ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಿರಬೇಕು. ಪ್ರವರ್ಗ-1ರಡಿಯಲ್ಲಿ ಬರುವ ಕ್ರಮ ಸಂಖ್ಯೆ ಪ್ರವರ್ಗ-1ರ 53(ಎ)ಯಿಂದ 53(ವಿ)ವರೆಗಿನ ಉಪ್ಪಾರ ಮತ್ತು ಇತರ ಜಾತಿಗಳಿಗೆ ಸೇರಿದವರಾಗಿರಬೇಕು. ಅರ್ಜಿದಾರರ ವಾರ್ಷಿಕ ವರಮಾನವು ಗ್ರಾಮೀಣ ಪ್ರದೇಶದಲ್ಲಿ 98,000/- ರೂಪಾಯಿ ಮೀರಿರಬಾರದು. ಅರ್ಜಿದಾರರ ವಯಸ್ಸು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 55 ವರ್ಷಗಳ ಮಿತಿಯೊಳಗಿರಬೇಕು. ಮಹಿಳೆಯರಿಗೆ ಈ ಯೋಜನೆಯಲ್ಲಿ ಶೇ.33 ರಷ್ಟು ಮೀಸಲು ನಿಗದಿಪಡಿಸಲಾಗಿದೆ. ಅಂಗವಿಕಲರಿಗೆ ಈ ಯೋಜನೆಯಲ್ಲಿ ಶೇ.5ರಷ್ಟು ಮೀಸಲು ನಿಗದಿಪಡಿಸಲಾಗಿದೆ.

ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು:


ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸುವಾಗ ರೈತರ ಬಳಿ ಆಧಾರ್ ಕಾರ್ಡ,
ಚಾಲ್ತಿಯಲ್ಲಿರುವ ಜಾತಿ ಮತ್ತು ಆದಾಯ ಪ್ರಮಾಣ ಪತ್ರ,
ಬ್ಯಾಂಕ್ ಪಾಸ್ಬುಕ್ ಝೆರಾಕ್ಸ ಪ್ರತಿ,
ಜಮೀನು(RTC) ದಾಖಲೆ ಬೇಕು.
ಅರ್ಜಿದಾರರು ಸಣ್ಣ ಮತ್ತು ಅತೀ ಸಣ್ಣ ರೈತರಾಗಿರುವ ಬಗ್ಗೆ ಕಂದಾಯ ಅಧಿಕಾರಿಗಳಿಂದ ಪಡೆದ ಪ್ರಮಾಣ ಪತ್ರ ಹೊಂದಿರಬೇಕು.
ಉಚಿತ ಕೊಳವೆ ಬಾವಿ ಕೊರೆಸಲು ಒಂದೇ ಸ್ಥಳಕ್ಕೆ ಹೊಂದಿಕೊಂಡಿರುವಂತೆ ಕನಿಷ್ಠ ಎರಡು ಎಕರೆ ಜಮೀನು ಹೊಂದಿರಬೇಕು ಈ ಜಿಲ್ಲೆಯ ರೈತಾಪಿ ವರ್ಗದವರಿಗೆ. ಉಡುಪಿ, ದಕ್ಷಿಣ ಕನ್ನಡ, ಕೊಡಗು, ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ ಹಾಗೂ ಹಾಸನ ಜಿಲ್ಲೆಗಳಲ್ಲಿ ಕನಿಷ್ಠ ಒಂದು ಎಕರೆ ಜಮೀನು ಹೊಂದಿದ್ದರೆ ಸಾಕು.

ಅರ್ಜಿ ಎಲ್ಲಿ ಸಲ್ಲಿಸಬೇಕು:

ಇದನ್ನೂ ಓದಿ: ಸಿರಿಧಾನ್ಯ ಬೆಳೆದ ರೈತರಿಗೆ ಹೆಕ್ಟೇರ್‍ ಗೆ 15,000 ರೂ ಪ್ರೋತ್ಸಾಹಧನ


ಸೇವಾಸಿಂಧು ತಂತ್ರಾಂಶದಲ್ಲಿ, ಗ್ರಾಮ ಒನ್, ಬೆಂಗಳೂರು ಒನ್, ಕರ್ನಾಟಕ ಒನ್, ನಾಗರಿಕ ಸೇವಾ ಕೇಂದ್ರಗಳಲ್ಲಿ ಅರ್ಹ ರೈತರು ಅರ್ಜಿ ಸಲ್ಲಿಸಬಹುದು.
ಕೊನೆಯ ದಿನಾಂಕ: ಮಾರ್ಚ2, 2023ರೊಳಗಾಗಿ ಆನ್ಲೈನ್ ಮೂಲಕವೇ ಅರ್ಜಿ ಸಲ್ಲಿಸಬೇಕು.


ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮ ವೆಬ್ಸೈಟ್ಗೆ ಭೇಟಿ ನೀಡಲು
ಇಲ್ಲಿ ಕ್ಲಿಕ್ ಮಾಡಿ.ಹೆಚ್ಚಿನ ಮಾಹಿತಿಗೆ

ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮದ ಸಹಾಯವಾಣಿ ಸಂಖ್ಯೆ 7026288888ಗೆ ಬೆಳಿಗ್ಗೆ 10 ರಿಂದ ಸಾಯಂಕಾಲ 5.30 ಗಂಟೆಯವರೆಗೆ ಕರೆ ಮಾಡಬಹುದು.

ಸೇವಾ ಸಿಂಧು ತಂತ್ರಾಂಶದ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

ಇತ್ತೀಚಿನ ಸುದ್ದಿಗಳು

Related Articles