Thursday, September 19, 2024

Integrated Farming System: ಕೃಷಿ ಇಲಾಖೆಯ ಸಮಗ್ರ ಕೃಷಿ ಪದ್ಧತಿ ಯೋಜನೆಯಡಿ ಕೃಷಿಕರಿಗೆ ಒಂದು ಲಕ್ಷದವರೆಗೆ ಸಹಾಯಧನ:

ಆತ್ಮೀಯ ರೈತ ಬಾಂದವರೇ ಇತ್ತೀಚಿನ ದಿನಗಳಲ್ಲಿ ಕೃಷಿಯಲ್ಲಿ ಒಂದೇ ಬೆಳೆಯ ಮೇಲೆ ಅವಲಂಬನೆಯಾಗಿದ್ದರೆ ಕೃಷಿಯಲ್ಲಿ ಖುಷಿ ಕಾಣಲು ಸಾಧ್ಯವಿಲ್ಲ. ಕೃಷಿಯಲ್ಲಿ ಲಾಭ ಪಡೆಯಬೇಕಾದರೆ, ವೈವಿಧ್ಯಮಯವಾಗಿ ಬೆಳೆ ಬೆಳೆಯಬೇಕಾಗುತ್ತದೆ. ಹಾಗೂ ವರ್ಷಪೂರ್ತಿ ಆದಾಯ ಬರುವ ರೀತಿ ಕೃಷಿಯಲ್ಲಿ ತೊಡಗಬೇಕಾಗುತ್ತದೆ.

ಆ ನಿಟ್ಟಿನಲ್ಲಿ ಕೃಷಿ ಇಲಾಖೆಯಿಂದ ಸಮಗ್ರ ಕೃಷಿ ಪದ್ಧತಿ ಅಳವಡಿಸಿಕೊಳ್ಳಲು ಆಸಕ್ತಿಯಿರುವ ರೈತರಿಗೆ 2024-25 ನೇ ಸಾಲಿನ ರಾಷ್ಟ್ರೀಯ ಕೃಷಿ ವಿಕಾಸ್ ಯೋಜನೆಯಡಿ ( RKVY) ಸಮಗ್ರ ಕೃಷಿ ಪದ್ಧತಿಯ ಘಟಕಕ್ಕೆ ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ಸಮಗ್ರ ಕೃಷಿ ಪದ್ಧತಿಯೆಂದರೆ ಎರಡು ಅಥವಾ ಹೆಚ್ಚಿನ ಕೃಷಿ ಸಂಬಂಧಿತ ಚಟುವಟಿಕೆಗಳನ್ನು ಪರಸ್ಪರ ಅವಲಂಬನೆಯೊಂದಿಗೆ ಅಳವಡಿಸಿಕೊಳ್ಳುವುದು ಅಥವಾ ಲಭ್ಯವಿರುವ ಸಂಪನ್ಮೂಲಗಳನ್ನು ಬಳಸಿಕೊಳ್ಳುವುದು, ರಾಜ್ಯದ ರೈತರು ಅನೇಕ ಶತಮಾನಗಳಿಂದ ವರ್ಷಪೂರ್ತಿ ಆದಾಯ ಮತ್ತು ಹೆಚ್ಚುವರಿ ಉದ್ಯೋಗಾವಕಾಶಗಳಂತಹ ಅನುಕೂಲಗಳಿಗಾಗಿ ಸಮಗ್ರ ಕೃಷಿ ಪದ್ಧತಿಯನ್ನು ಅಳವಡಿಸುತ್ತಿದ್ದಾರೆ. ಕ್ಷೇತ್ರ ಮಟ್ಟದಲ್ಲಿ ಕೃಷಿಯೇತರ ಚಟುವಟಿಕೆಗಳಾದ ಜಾನುವಾರು, ಕೋಳಿ, ಮೀನುಗಾರಿಕೆ, ರೇಷ್ಮೆ ಇವುಗಳನ್ನು ಒಗ್ಗೂಡಿಸಿ ಅಧಿಕ ಆದಾಯ ಪಡೆಯಬಹುದಾಗಿರುತ್ತದೆ.

ಇದನ್ನೂ ಓದಿ: ರೈತರೇ 2023 ರಲ್ಲಿ ಬೆಳೆ ಸಮೀಕ್ಷೆಯಲ್ಲಿ ನಿಮ್ಮ ಪಹಣಿ/RTC ಗೆ ದಾಖಲಾದ ಬೆಳೆ ಯಾವುದು ಎಂದು ತಿಳಿಯಲು ಇಲ್ಲಿದೆ ಮಾಹಿತಿ!

ಸಮಗ್ರ ಕೃಷಿ ಪದ್ಧತಿ ಶ್ರಮದಾಯಕವಾಗಿದ್ದರೂ, ರೈತರ ಕುಟುಂಬಗಳು ವರ್ಷದುದ್ದಕ್ಕೂ ಆದಾಯ ಪಡೆಯುವಂತೆತೊಡಗಿಸಿಕೊಳ್ಳಲು ಸಹಾಯಕವಾಗುತ್ತವೆ. ಸಮಗ್ರ ಕೃಷಿ ಪದ್ಧತಿಯನ್ನು ಕ್ಲಸ್ಟರ್ (ಗುಚ್ಛ) ಮಾದರಿಯಲ್ಲಿ ಅನುಷ್ಠಾನ ಮಾಡುವುದರಿಂದ, ಸಂಪನ್ಮೂಲಗಳ ಸದ್ಬಳಕೆ ಮತ್ತು ಸಾಮೂಹಿಕ ಉತ್ಪನ್ನಗಳ ಮಾರಾಟಕ್ಕಾಗಿ ಉತ್ತೇಜಿಸಬಹುದಾಗಿರುತ್ತದೆ. ಇದರಲ್ಲಿ ಉತ್ಪಾದನಾ ವೆಚ್ಚ ಕಡಿಮೆಯಿದ್ದು, ಸುಸ್ಥಿರ ಆಧಾರದ ಮೇಲೆ ಆದಾಯವನ್ನು ಹೆಚ್ಚಿಸುತ್ತದೆ.

ಸಮಗ್ರ ಕೃಷಿ ಪದ್ಧತಿಯು ಏಕ ಬೆಳಪದ್ಮತಿ ವಿಧಾನದಿಂದ ಬಹು ಬೆಳಪದ್ಧತಿ ಬದಲಾವಣೆಗೆ ಅವಕಾಶ ಕಲ್ಪಿಸುತ್ತದೆ. ಕೃಷಿ ಪದ್ಧತಿಗಳಲ್ಲಿ ಜಾನುವಾರು, ಬೆಳೆ ಉತ್ಪಾದನೆ, ತೋಟಗಾರಿಕೆ, ಇತರ ರೈತರ ಆದಾಯ ಹೆಚ್ಚಿಸುವ ಕಾರ್ಯಕ್ರಮಗಳಿಗೆ ಒತ್ತು ನೀಡಲಾಗುತ್ತದೆ.

ಸಮಗ್ರ ಕೃಷಿ ಪದ್ಧತಿ ವಿಸ್ತರಣೆ ಯಲ್ಲಿ ಅಳವಡಿಸಿಕೊಳ್ಳಬೇಕಾದ ಘಟಕಗಳು:

1)ಕೃಷಿ ಹೊಂಡ

2)ಗದ್ದೆ/ಹೊಲ(ಕಡ್ಡಾಯ)

3)ಎರೆಹುಳು ತೋಟ್ಟಿ

4)ಜೇನು ಪೆಟ್ಟಿಗೆ

5)ಹಸು/ಕೋಳಿ ಸಾಕಾಣಿಕೆ

6)ಅರಣ್ಯ ಸಸಿ ನಾಟಿ

7)ಅಜೊಲ್ಲ ತೊಟ್ಟಿ

ಫಲಾನುಭವಿ ಆಯ್ಕೆ ಹೇಗೆ ಮಾಡಲಾಗುತ್ತದೆ:

  1. ಪ್ರತಿ ಪಂಚಾಯಿತಿಗೆ ಒಂದು ಅಥವಾ ಒಂದಕ್ಕಿಂತ ಹೆಚ್ಚು ಮಾದರಿಯಂತೆ ಪ್ರತಿ ಹೋಬಳಿಯಲ್ಲಿ 8-10 ಸಮಗ್ರ ಕೃಷಿ ಪದ್ಧತಿ ತಾಕುಗಳನ್ನು ಆಯಾ ಜಿಲ್ಲೆಗಳ ಮಳೆಯಾಶ್ರಿತ ಪ್ರದೇಶ ಅಥವಾ ನೀರಾವರಿ ಪ್ರದೇಶಕ್ಕನುಗುಣವಾಗಿ ಸ್ಥಾಪಿಸುವುದು.
    ಕಾರ್ಯಕ್ರಮ ಅನುಷ್ಠಾನ ಮಾಡುವುದು ಹಾಗೂ ತದನಂತರ ಬೇಡಿಕೆ ಇರುವ ಪಂಚಾಯಿತಿಗಳಲ್ಲಿ ಒಂದಕ್ಕಿಂತ ಹೆಚ್ಚು ಮಾದರಿಯನ್ನು ಅನುಷ್ಠಾನ ಮಾಡುಲಾಗುತ್ತದೆ.
  2. ಸಮಗ್ರ ಕೃಷಿ ಪದ್ಧತಿ ಪ್ರಾತ್ಯಕ್ಷಿಕೆಗಳನ್ನು ಕನಿಷ್ಠ 1 ಎಕರೆಯಿಂದ ಗರಿಷ್ಠ 1 ಹೆಕ್ಟೇರ್‍ – ಪ್ರದೇಶದಲ್ಲಿ ಏರ್ಪಡಿಸಲಾಗುತ್ತದೆ.
  3. ರೈತ ಸಂಪರ್ಕ ಕೇಂದ್ರವಾರು ಕೃಷಿ ಅಧಿಕಾರಿ/ಸಹಾಯಕ ಕೃಷಿ ಅಧಿಕಾರಿ ತಮ್ಮ ವ್ಯಾಪ್ತಿಯ ಅನುಷ್ಠಾನ ಮಾಡುವ ರೈತರ ಪಟ್ಟಿಯನ್ನು ಸಿದ್ಧಪಡಿಸಿ. ಫಲಾನುಭವಿಯು ಆಸಕ್ತ ಪ್ರಗತಿ ಪರ ರೈತನಾಗಿದ್ದು ಸಮಗ್ರ ಕೃಷಿ ಪದ್ಧತಿ ಅಳವಡಿಸಲು ಶೇ 50 ರಷ್ಟು ವಂತಿಕೆ ಭರಿಸಲು ಸಿದ್ಧನಾಗಿರಬೇಕು.
    ಇತರ ರೈತರು ಅಳವಡಿಸಲು ಸೂಕ್ತವಾಗುವಂತೆ ಮಾದರಿಯಾಗಿ ಸಮಗ್ರ ಕೃಷಿ ಪದ್ಧತಿಯ ತಾಕನ್ನು ರೂಪಿಸುವ ಮನೋಭಾವನೆ ಇರುವ ರೈತರನ್ನು ಆಯ್ಕೆ ಮಾಡಲಾಗುತ್ತದೆ.
  4. ನಿಯಮಾನುಸಾರ ಪರಿಶಿಷ್ಟ ಜಾತಿ (17.15%), ಪರಿಶಿಷ್ಟ ಪಂಗಡ (6.95%) ರಂತ ಆಯ್ಕೆ ಮಾಡುವುದು. ಮಹಿಳೆಯರಿಗೆ (33%) ರಷ್ಟು, ಅಲ್ಪ ಸಂಖ್ಯಾತರಿಗೆ (15%) ಆದ್ಯತೆ ನೀಡಲಾಗುತ್ತದೆ.
  5. ಇದನ್ನೂ ಓದಿ: ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಇಲ್ಲಿಯವರೆಗೂ ಎಷ್ಟು ಕಂತು ಹಣ ಬಂದಿದೆ ಎಂದು ತಿಳಿಯಲು ಇಲ್ಲಿದೆ ಮಾಹಿತಿ.

ಯೋಜನೆಗೆ ಅರ್ಜಿ ಎಲ್ಲಿ ಸಲ್ಲಿಸಬೇಕು?

ಆಸಕ್ತ ರೈತರು ತಮ್ಮ ಹೋಬಳಿಯ ರೈತ ಸಂಪರ್ಕ ಕೇಂದ್ರ , ಮತ್ತು ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಭೇಟಿ ಮಾಡಿ ಅಗತ್ಯ ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸಬವುದು.

ಬೇಕಾಗುವ ದಾಖಲಾತಿಗಳು ಕೆಳಗಿನಂತಿವೆ:

  1. ಆಧಾರ್ ಕಾರ್ಡ
  2. ಬ್ಯಾಂಕ್ ಪಾಸ್ ಬುಕ್
  3. ಪೋಟೋ
  4.  ಪಹಣಿ/ಆರ್‌ ಟಿ ಸಿ
    ಮತ್ತು ಇಲಾಖೆ ಅಧಿಕಾರಿಗಳು ಕೆಳುವ ಅವಶ್ಯಕ ದಾಖಲಾತಿಗಳು

ಇತ್ತೀಚಿನ ಸುದ್ದಿಗಳು

Related Articles