Sunday, September 8, 2024

Mobile Repair Training- ಉಚಿತ ಮೊಬೈಲ್ ರಿಪೇರಿ ತರಬೇತಿಗೆ ಅರ್ಜಿ ಆಹ್ವಾನ! ಸಾಲ ಪಡೆಯಲು ಮಾಹಿತಿ!

ಉಚಿತ 30 ದಿನಗಳ ಉಚಿತ ಮೊಬೈಲ್ ರಿಪೇರಿ ತರಬೇತಿಗೆ(Free Mobile Repair Training)ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಕೆನರಾ ಬ್ಯಾಂಕ್ ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಸಂಸ್ಥೆ, ಉಜಿರೆ ಕೇಂದ್ರದಲ್ಲಿ ಮೊಬೈಲ್ ಪೋನ್ ರಿಪೇರಿ(Mobile Repair) ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ಅಭ್ಯರ್ಥಿಗಳು ಈ ತರಬೇತಿಯಲ್ಲಿ ಭಾಗವಹಿಸಲು ಎಲ್ಲಿ ಅರ್ಜಿ ಸಲ್ಲಿಸಬೇಕು? ಅಗತ್ಯ ದಾಖಲಾತಿಗಳೇನು? ಈ ತರಬೇತಿ ಕುರಿತು ಇತ್ಯಾದಿ ಸಂಪೂರ್ಣ ಮಾಹಿತಿಯನ್ನು ಈ ಅಂಕಣದಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: Free electronics repair training- ಉಚಿತ ಟಿ ವಿ ಮತ್ತು ಎಲೆಕ್ಟ್ರಾನಿಕ್ಸ್ ಉಪಕರಣಗಳ ರಿಪೇರಿ ತರಬೇತಿಗೆ ಅರ್ಜಿ ಆಹ್ವಾನ!

How can apply-ಯಾರೆಲ್ಲ ಈ ತರಬೇತಿ ಪಡೆಯಲು ಅರ್ಹರು?

1) 18 ರಿಂದ 45 ವರ್ಷದೊಳಗಿನವರು ಅರ್ಜಿ ಸಲ್ಲಿಸಬಹುದು.
2) ಸ್ವ-ಉದ್ಯೋಗ ಪ್ರಾರಂಭಿಸಲು ಆಸಕ್ತಿಯಿರುವವರು ಅರ್ಜಿ ಸಲ್ಲಿಸಬಹುದು.
3) ಬಿಪಿಎಲ್ ಕಾರ್ಡ ಹೊಂದಿರುವವರಿಗೆ ಮೊದಲ ಅದ್ಯತೆ ನೀಡಲಾಗುತ್ತದೆ.
4) ಗ್ರಾಮೀಣ ಭಾಗದವರಿಗೆ ಮೊದಲ ಅದ್ಯತೆ ಇರುತ್ತದೆ.

ಇದನ್ನೂ ಓದಿ: Milk Incentive-2024: ಹಾಲಿನ ಪ್ರೋತ್ಸಾಹ ಧನ ಅಕೌಂಟ್ ಗೆ ಜಮಾ ಅಗಿರುವುದನ್ನು ಹೇಗೆ ಚೆಕ್ ಮಾಡುವುದು?

Application- ಎಲ್ಲಿ ಅರ್ಜಿ ಸಲ್ಲಿಸಬೇಕು?

ಈ ತರಬೇತಿಯನ್ನು ಪಡೆಯಲು ಆಸಕ್ತಿಯಿರುವವರು 08256236404, 9591044014, 944834569 ಈ ಮೊಬೈಲ್ ಸಂಖ್ಯೆಗೆ ಕರೆ ಮಾಡಿ ಅರ್ಜಿ ಸಲ್ಲಿಸಬಹುದು ಅಥವಾ ಈ 6364561982 ವಾಟ್ಸಾಪ್ ಸಂಖ್ಯೆಗೆ ಸಂದೇಶ ಕಳುಹಿಸಿ ಹೆಸರು ನೋಂದಣಿ ಮಾಡಿಕೊಳ್ಳಬಹುದು.

Required Documents for application-ಅರ್ಜಿ ಸಲ್ಲಿಸಲು ಅಗತ್ಯ ದಾಖಲಾತಿಗಳು:

ಅರ್ಜಿದಾರರ ಆಧಾರ್ ಕಾರ್ಡ ಪ್ರತ
ಪೋಟೋ- 1
ಬಿಪಿಎಲ್ ಕಾರ್ಡ್ ಪ್ರತಿ
ಬ್ಯಾಂಕ್ ಪಾಸ್ ಬುಕ್

Mobile Repair Training Date- ತರಬೇತಿ ನಡೆಯುವ ಅವಧಿ:

ಈ ತರಬೇತಿಯು 04 ಏಪ್ರಿಲ್ 2024 ರಿಂದ ಪ್ರಾರಂಭವಾಗಿ 03 ಮೇ 2024 ರವರೆಗೆ ನಡೆಯಲಿದೆ.

ಇದನ್ನೂ ಓದಿ: Yashaswini card – ಯಶಸ್ವಿನಿ ಕಾರ್ಡ ಪಡೆಯಲು ಅರ್ಜಿ ಸಲ್ಲಿಸಲು ಇನ್ನೂ 10 ದಿನ ಮಾತ್ರ ಅವಕಾಶ!

ತರಬೇತಿಯು ಸಂಪೂರ್ಣ ಉಚಿತ:

ತರಬೇತಿಯಲ್ಲಿ ಭಾಗವಹಿಸುವ ಎಲ್ಲಾ ಅಭ್ಯರ್ಥಿಗಳಿಗೆ ಉಚಿತ ವಸತಿ ಮತ್ತು ಊಟ ಸೌಲಭ್ಯವಿರುತ್ತದೆ. ಇದಲ್ಲದೇ ಸ್ವ-ಉದ್ಯೋಗ ಪ್ರಾರಂಭಿಸಲು ಬ್ಯಾಂಕಿನಿಂದ ಸಿಗುವ ಸಾಲದ ಬಗ್ಗೆ ಮಾಹಿತಿಯನ್ನು ಸಹ ನೀಡಲಾಗುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Training center- ತರಬೇತಿ ನಡೆಯುವ ಸ್ಥಳ ವಿವರ:

ಧರ್ಮಸ್ಥಳ ಸಮೀಪ ಉಜಿರೆಯ ರುಡ್ ಸೆಟ್ ಸಂಸ್ಥೆಯ ಕೇಂದ್ರದಲ್ಲಿ ತರಬೇತಿ ನಡೆಯಲಿದೆ.

ಹೆಚ್ಚಿನ ಮಾಹಿತಿ ಪಡೆಯಲು ರುಡ್ ಸೆಟ್ ಸಂಸ್ಥೆಯ ವೆಬ್ಸೈಟ್ ಲಿಂಕ್: Click here

ಇದನ್ನೂ ಓದಿ: Crop insurence Questions and Answers: ಬೆಳೆ ವಿಮೆ ಕುರಿತು ರೈತರಿಗೆ ಅನುಮಾನಗಳಿಗೆ ತೆರೆ ನೀಡಿದ ಇಲಾಖೆ: PMFBY: ರೈತರ ಹಲವು ಪ್ರಶ್ನೆಗಳಿಗೆ ಉತ್ತರಗಳು ಈ ಲೇಖನದಲ್ಲಿ

ಇತ್ತೀಚಿನ ಸುದ್ದಿಗಳು

Related Articles